ಪ್ರಮೋದ್ ಮುತಾಲಿಕ್ ಗೆ ಬೆದರಿಕೆ ಕರೆ ಹಿನ್ನೆಲೆ ➤ ಪುತ್ತೂರಿನ ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿರುವ ಬಗ್ಗೆ ವರದಿಯಾಗಿದೆ.

 

ನನಗೆ ಮೊಬೈಲ್ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಅವರು ಧಾರವಾಡ ಉಪನಗರ ಠಾಣೆಗೆ ನೀಡಿದ ದೂರಿನನ್ವಯ ಇದೀಗ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಲು ನ್ಯಾಯಾಲಯವು ಅನುಮತಿ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮುತಾಲಿಕ್, ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಶೀಘ್ರ ಪತ್ತೆ ಮಾಡಲು ಪೊಲೀಸರಿಗೆ ಮನವಿ ಮಾಡಿದ್ದಾರೆ.ಈಗಾಗಲೇ ಬೆದರಿಕೆಯೊಡ್ಡಿದಾತ ಪುತ್ತೂರಿನ ಆಸಿಫ್ ಎಂದು ಗೊತ್ತಾಗಿದೆ. ಈ ಬಗ್ಗೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಅನುಮತಿ ನೀಡಿದೆ.

error: Content is protected !!

Join the Group

Join WhatsApp Group