ಬೆಳ್ತಂಗಡಿ: ಫಾಲ್ಸ್ ಗೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04. ಸ್ನೇಹಿತರೊಂದಿಗೆ ದಿಡುಪೆ ಸಮೀಪದ ಎರ್ಮಾಯಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.

 

 

ಮೃತ ವಿದ್ಯಾರ್ಥಿಯನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿವೇಕ್ (17) ಎಂದು ಗುರುತಿಸಲಾಗಿದೆ. ಈತನ ಸಹಿತ 7 ವಿದ್ಯಾರ್ಥಿಗಳು ಮಲವಂತಿಗೆ ಬಳಿಯ ಎರ್ಮಾಯಿ ಫಾಲ್ಸ್ ಗೆ ಶನಿವಾರದಂದು ಮದ್ಯಾಹ್ನದ ವೇಳೆಗೆ ತೆರಳಿದ್ದು, ಈ ಸಂದರ್ಭ ವಿವೇಕ್ ಎಂಬಾತ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಜೊತೆಯಲ್ಲಿದ್ದವರು ಆತನ ರಕ್ಷಣೆಗೆ ಪ್ರಯತ್ನಿಸಿದರಾದರೂ ಸಾಧ್ಯವಾಗದೇ ಇದ್ದಯ, ತಕ್ಷಣವೇ ಜೊತೆಯಲ್ಲಿದ್ದವರು ಬೊಬ್ಬೆ ಹೊಡೆದಾಗ ಸ್ಥಳೀಯ ವ್ಯಕ್ತಿಯ ಸಹಕಾರದಿಂದ ವಿದ್ಯಾರ್ಥಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅದರೆ ಅದಾಗಲೇ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

error: Content is protected !!
Scroll to Top