ಕಡಬ: ಪತ್ನಿಯೊಂದಿಗೆ ಜಗಳವಾಡಿ ನಾಪತ್ತೆಯಾಗಿದ್ದ ಪತಿ ➤ ಮೃತದೇಹ ಕಾಡಿನಲ್ಲಿ ಪತ್ತೆ

Death, deadbody, Waterfall

(ನ್ಯೂಸ್ ಕಡಬ) newskadaba.com ಕಡಬ, ಡಿ.04. ವ್ಯಕ್ತಿಯೋರ್ವರ ಮೃತದೇಹವೊಂದು ದೋಲ್ಪಾಡಿ ಗ್ರಾಮದ ಕೊಜಂಬಾಡಿ ಅರಣ್ಯ ಪ್ರದೇಶದಲ್ಲಿ ಕವಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

 

ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದಿ.ಕೊರಗಪ್ಪ ಎಂಬವರ ಪುತ್ರ ದೇವರಾಜ್ ಎಂದು ಗುರುತಿಸಲಾಗಿದೆ. ಲಾರಿ ಚಾಲಕನಾಗಿದ್ದ ದೇವರಾಜ್, ಕಾಣಿಯೂರು ಗ್ರಾಮದ ನಾವೂರು ನಿವಾಸಿಯನ್ನು 13 ವರ್ಷಗಳ ಹಿಂದೆ ವಿವಾಹವಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ದೇವರಾಜ್ ಅಮಲು ಪದಾರ್ಥ ಸೇವಿಸಿ ಆಗಾಗ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದು, ಹಲವು ಬಾರಿ ಕುಟುಂಬಸ್ಥರು ಬುದ್ದಿವಾದ ತಿಳಿಸಿದ್ದರು. ನವೆಂಬರ್ 28ರಂದು ರಾತ್ರಿ ದೇವರಾಜ ಅಮಲು ಪದಾರ್ಥ ಸೇವಿಸಿ ಹೆಂಡತಿ ಜತೆ ಜಗಳವಾಡಿದ್ದು, ಅವರ ತಂದೆ ನಾಗಪ್ಪ ಅವರು ಮನೆಗೆ ಬಂದು ಬುದ್ದಿವಾದ ಹೇಳಿದ್ದರು. ನವೆಂಬರ್ 29ರಂದು ದೇವರಾಜ್ ನಾಪತ್ತೆಯಾಗಿದ್ದು ಸ್ಥಳೀಯರು, ಮನೆಯವರು ದೋಳ್ಪಾಡಿ ಪರಿಸರದಲ್ಲಿ ಮತ್ತು ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ದೇವರಾಜನ ಮೃತ ದೇಹವು ದೊಲ್ಪಾಡಿ ಗ್ರಾಮದ ಕೊಜಂಬಾಡಿ ಅರಣ್ಯ ಪ್ರದೇಶದಲ್ಲಿ ಕವಚಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಕಡಬ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group