ಪುತ್ತೂರು: ವಾಕಿಂಗ್ ಹೋಗುತ್ತಿದ್ದಾಗ ಬೈಕ್ ಢಿಕ್ಕಿ ► ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com
ಪುತ್ತೂರು, ನ.21. ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದ ಸಂದರ್ಭ ಬೈಕೊಂದು ಢಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಪಾದಚಾರಿಯು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಪುತ್ತೂರಿನ ಕೆಮ್ಮಾಯಿ ನೀರ್ಪಾಜೆ ನಿವಾಸಿ ರಾಮಚಂದ್ರ ಶಾಸ್ತ್ರಿ(78ವ) ಎಂದು ಗುರುತಿಸಲಾಗಿದೆ. ರಾಮಚಂದ್ರ ಶಾಸ್ತ್ರಿಯವರು ಇತ್ತೀಚೆಗೆ ಎಂದಿನಂತೆ ಬೆಳಿಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡಿದ್ದ ರಾಮಚಂದ್ರ ಶಾಸ್ತ್ರಿಯವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top