ಪ್ರಾಕೃತಿಕ ವಿಕೋಪದ ಸಂದರ್ಭ ಅತ್ಯುತ್ತಮ ಕಾರ್ಯದಕ್ಷತೆ ➤ ಗೃಹರಕ್ಷಕದಳದ ಸೆಕ್ಷನ್ ಲೀಡರ್ ದಿನೇಶ್ ಅವರಿಗೆ ಕಂಚಿನ ಪದಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 07. ಪ್ರಾಕೃತಿಕ ವಿಕೋಪ ಪರಿಹಾರ ಕಾರ್ಯಾಚರಣೆಯಲ್ಲಿ ಅತ್ಯುತ್ತಮ ಕಾರ್ಯದಕ್ಷತೆಯನ್ನು ಮೆರೆದ ಕಾರಣಕ್ಕಾಗಿ ಉಪ್ಪಿನಂಗಡಿ ಗೃಹ ರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ಹಾಗೂ ಸೆಕ್ಷನ್ ಲೀಡರ್ ಆಗಿರುವ ದಿನೇಶ್ ಬಿ.ಯವರಿಗೆ ಭಾರತ ಸರಕಾರದ ಗೃಹ ಮಂತ್ರಾಲಯ ನವದೆಹಲಿ ಕೊಡಮಾಡಿದ ಕಂಚಿನ ಪದಕ ಹಾಗೂ ಪ್ರಶಂಸನೀಯ ಪತ್ರವನ್ನು ಪ್ರದಾನ ಮಾಡಲಾಯಿತು.

 

ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಗೃಹ ರಕ್ಷಕ ದಳದ ಮಹಾ ಸಮಾದೇಷ್ಠರಾದ ಅಮರ್ ಕುಮಾರ್ ಪಾಂಡೆ (ಐಪಿಎಸ್) ಪದಕ ಹಾಗೂ ಪ್ರಶಂಸನೀಯ ಪತ್ರವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗೃಹರಕ್ಷಕದಳ ಆರಕ್ಷಕ ಉಪ ಮಹಾ ಸಮಾದೇಷ್ಠರಾದ ರೇಣುಕಾ ಸುಕುಮಾರನ್ (ಐಪಿಎಸ್) ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು, ಗೃಹ ರಕ್ಷಕದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group