ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 07. ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಮೃತರನ್ನು ಸೈಂಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿ, ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ ಎಸ್.(22) ಎಂದು ಗುರುತಿಸಲಾಗಿದೆ. ಸೋಮವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೇ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಬೇಕಿದೆ.

Scroll to Top