ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣಾ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ದ‌.ಕ ಜಿಲ್ಲಾ ವಕೀಲರ ಸಂಘದ ವತಿಯಿಂದ ಮಂಗಳೂರು ಕೋರ್ಟ್ ಎದುರು ಬುಧವಾರದಂದು ಪ್ರತಿಭಟನೆ ನಡೆಸಲಾಯಿತು.

 

ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂಧಕಾಜ್ಞೆ ಇದ್ದರೂ ಕೂಡಾ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಎಫ್ ಐ ಆರ್ ದಾಖಲಿಸಿ, ರಾತೋರಾತ್ರಿ ವಕೀಲರ ಮನೆ ಪ್ರವೇಶಿಸಿ ದೌರ್ಜನ್ಯವೆಸಗಿರುವುದನ್ನು ಖಂಡಿಸಿ ನೂರಾರು ವಕೀಲರು ಕೋರ್ಟ್ ಮುಂಭಾಗ ಪ್ರತಿಭಟನೆ ನಡೇಸಿದ್ದಾರೆ. ಇನ್ನು ಪುಂಜಾಲಕಟ್ಟೆ ಪಿಎಸ್ಸೈ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ವಕೀಲರ ಸಂಘವು ಪಿಎಸ್ಸೈ ಅಮಾನತಿಗೆ ಆಗ್ರಹಿಸಿದೆ.

error: Content is protected !!

Join the Group

Join WhatsApp Group