ಆಲಂಕಾರು ನಿವಾಸಿಗೆ ಧರ್ಮಸ್ಥಳದಲ್ಲಿ ಹಲ್ಲೆ- ಜೀವಬೆದರಿಕೆ ಆರೋಪ ➤ ದೂರು ದಾಖಲು

Crime

(ನ್ಯೂಸ್ ಕಡಬ) newskadaba.com ಕಡಬ, ಡಿ. 09. ಆಲಂಕಾರು ಗ್ರಾಮದ ವ್ಯಕ್ತಿಯೊಬ್ಬರಿಗೆ ತಂಡವೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಉಜಿರೆಯಲ್ಲಿ ನಡೆದಿದೆ.

 

ಹಲ್ಲೆಗೊಳಗಾದವರನ್ನು ತಾಲೂಕಿನ ನೆಕ್ಕರೆ ನಿವಾಸಿ ಬಾಬು ಯಾನೆ ರುದ್ರ (53) ಎಂದು ಗುರುತಿಸಲಾಗಿದೆ. ಇವರು ಆಲಂಕಾರಿನಿಂದ ಬೆಳ್ತಂಗಡಿ ಕಡೆಗೆ ಹೋಗಲೆಂದು ಉಪ್ಪಿನಂಗಡಿಯಿಂದ ಧರ್ಮಸ್ಥಳಕ್ಕೆ ತೆರಳಿ, ಬಸ್ಸಿನಿಂದ ಇಳಿದು ಪಜಿರಡ್ಕ ಕಡೆಗೆ ಹೋಗುವ ರಸ್ತೆಯಲ್ಲಿ ರಾತ್ರಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಆರೋಪಿಗಳಾದ ಶಂಕರ ಮತ್ತು ಮಕ್ಕಳಾದ ಸದಾಶಿವ ಹಾಗೂ ಶಶಿ ಎಂಬವರು ತಡೆದು ನಿಲ್ಲಿಸಿ ನೀನು ನಿನ್ನ ಹೆಂಡತಿಗೆ ಮನೆ ಕಟ್ಟಲು ಫೌಂಡೇಶನ್ ಹಾಕಿದ್ದು ಮುಂದಕ್ಕೆ ಮನೆ ಕಟ್ಟಿ ಕೊಡಬಾರದು. ನೀನು ಮನೆ ಕಟ್ಟಲು ಪ್ರಾರಂಭಿಸಿದರೆ ನಿನ್ನ ಕೈಕಾಲು ಮುರಿಯುತ್ತೇವೆ ಎಂದು ಅವಾಚ್ಯ ಶಬ್ದಗಳಿಂದ ಬೈದು, ಆರೋಪಿ ಸದಾಶಿವನು ಆತನ ಕೈಯಲ್ಲಿದ್ದ ಕತ್ತಿಯಿಂದ ಬಾಬು ಅವರ ಎಡಕೈ ರಟ್ಟೆಗೆ ಕಡಿದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group