ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.09 ಬಟ್ಟೆ ಒಗೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ನೀರಿನ ಹೊಂಡದಲ್ಲಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಶಹಬಾದ ನಗರದ ರಾಮಘಡ ಆಶ್ರಯ ಕಾಲೋನಿಯಲ್ಲಿ ಸಂಭವಿಸಿದೆ.

ಮೃತರನ್ನು ರಾಮಘಡ ನಿವಾಸಿ ಮಾಣಿಕಮ್ಮ ಸಾಯಪ್ಪ ದಾಸರ(20) ಮತ್ತು ಕೀರ್ತಿಕಾ ರಾಜೇಶ(12) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯಲು ಹೋಗಿದ್ದ ಇವರು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಬಾಲಕಿಯರು ಕಾಣದೇ ಇರುವುದರಿಂದ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರ ನೆರವಿನಿಂದ ಮೃತದೇಹಗಳನ್ನು ತೆಗೆಸಿದ್ದಾರೆ. ಈ ಕುರಿತು ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group