ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ.10 ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೇ 17ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬೆಳ್ತಂಗಡಿಯಲ್ಲಿ 17ರಂದು ಏರ್ಪಡಿಸಿರುವ ತಾಲ್ಲೂಕು ಮಟ್ಟದ ಕಬಡ್ಡಿ ಟೂರ್ನಿಯನ್ನು ಸಿದ್ದರಾಮಯ್ಯ ಉದ್ಘಾಟಿಸುವರು. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

 

 

 

 

Scroll to Top