ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.10  ಮಂಗಳೂರಿನಲ್ಲಿ ಕುಕ್ಕರ್ ಪ್ರಕರಣದ ಆರೋಪಿ ಶಾರೀಕ್ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ ನೀಡಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ.

ಸ್ಪೋಟದ ಮುನ್ನ ಕೊಚ್ಚಿಗೆ ಹೋಗಿದ್ದು, ಅಲ್ಲಿ ವ್ಯವಹಾರ ನಡೆಸಿದವರ ಪೈಕಿ ನಾಲ್ವರ ಮಾಹಿತಿ ಲಭಿಸಿದ್ದು, ಇದರಲ್ಲಿ ಓರ್ವ ವಿದೇಶಿಗ, ಇಬ್ಬರು ಕೇರಳಿಯರು ಮತ್ತು ತಮಿಳುನಾಡು ನಿವಾಸಿಗಳು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

 

 

 

 

 

 

Scroll to Top