ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು ಮನೆಯೊಳಗಿದ್ದ ಬಾಲಕಿಯ ಕೈಯನ್ನು ಗಟ್ಟಿಯಾಗಿ ಹಿಡಿದು ಹೊರಗೆ ಎಳೆದಿದ್ದು, ಕೂಡಲೇ ಬಾಲಕಿ ಕಿರುಚಾಡಲು ಆರಂಭಿಸಿದ್ದಾಳೆ ಎನ್ನಲಾಗಿದೆ. ಮಾಹಿತಿ ತಿಳಿದ ಸ್ಥಳೀಯರು ಮನೆಯತ್ತ ಆಗಮಿಸಿ ಬಶೀರ್ ನನ್ನು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಮನೆಮಂದಿ ಮರ್ಯಾದೆಗೆ ಹೆದರಿ ಪ್ರಕರಣ ದಾಖಲಿಸಲು ಹಿಂಜರಿದಿದ್ದು, ವಿಚಾರ ತಿಳಿದ ಹಿಂದೂ ಸಂಘಟನಾ ಕಾರ್ಯಕರ್ತರು ಹೆತ್ತವರಿಗೆ ಬುದ್ದಿ ಹೇಳಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

error: Content is protected !!
Scroll to Top