ಮಂಗಳೂರು: ನೋಟಿನ ಕಂತೆ ಪತ್ತೆ ಪ್ರಕರಣ ➤ ವಾರಸುದಾರ ಠಾಣೆಗೆ ಹಾಜರು..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಪಂಪ್‌ವೆಲ್‌ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.

 

ತಾನು ಅಡಿಕೆ ವ್ಯಾಪಾರಿಯಾಗಿದ್ದು, ಹಣ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕೈಯಿಂದ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲಕ್ಷ ರೂ. ಇತ್ತು ಎಂದು ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ. ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ವ್ಯಕ್ತಿಗೆ ಸೂಚಿಸಿರುವುದಾಗಿ ತಿಳಿದುಬಂದಿದೆ. ನ. 26ರಂದು ತುಕಾರಾಂ ಹಾಗೂ ಶಿವರಾಜ್ ಎಂಬವರಿಗೆ ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್‌ಗಳು ಸಿಕ್ಕಿದ್ದು, ಇದರಲ್ಲಿ ಶಿವರಾಜ್ ಬಳಿ ಇದ್ದ 49,000 ರೂ.ಗಳನ್ನು ಪೊಲಿಸರು ವಶಪಡಿಸಿಕೊಂಡಿದ್ದರು. ಆದರೆ ಇದೀಗ ವ್ಯಕ್ತಿಯೊಬ್ಬರು ಠಾಣೆಗೆ ತೆರಳಿ ತಾನೇ ಆ ಹಣದ ವಾರೀಸುದಾರ ಎಂದು ಹೇಳಿಕೊಂಡಿದ್ದು ತನಿಖೆ ಮುಂದುವರಿದಿದೆ.

error: Content is protected !!
Scroll to Top