ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ 30 ಕೋಟಿ ರೂ. ಪರಿಹಾರ ಬಿಡುಗಡೆ ➤ ಸಚಿವ ಪ್ರಭು ಬಿ.ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13. ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ಮಾಲಕರುಗಳಿಗೆ ಪರಿಹಾರ ನೀಡಲು 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚರ್ಮಗಂಟು ರೋಗದಿಂದ ಬಳಲಿ ಮೃತಪಟ್ಟ ಜಾನುವಾರುಗಳ ಮಾಲಕರು ಮತ್ತು ರೈತರ ಆರ್ಥಿಕ ನಷ್ಟವನ್ನು ತಪ್ಪಿಸಲು ಮೃತ ರಾಸುಗಳಿಗೆ ಪರಿಹಾರ ನೀಡಲು 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ, ಈಗಾಗಲೇ 17 ಸಾವಿರ ಜಾನುವಾರುಗಳು ಮೃತಪಟ್ಟಿದ್ದು, ಜಾನುವಾರುಗಳ ಮಾಲಕರ ಆರ್ಥಿಕ ಸ್ಥಿತಿಯನ್ನು ಅರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 30 ಕೋಟಿ ರೂ. ಪರಿಹಾರ ಧನ ನೀಡಿರುವ ಕ್ರಮವನ್ನು ಅಭಿನಂದಿಸಿರುವ ಅವರು, ಕೃತಜ್ಞತೆಗಳನ್ನು ಸಲ್ಲಿಸಿ, ನಮ್ಮ ಸರ್ಕಾರ ಸದಾ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿದೆ, ಜಾನುವಾರುಗಳ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ಸಕ್ರಿಯವಾಗಿದೆ ಎಂದಿದ್ದಾರೆ. ರಾಜ್ಯದಲ್ಲಿ ಈವರೆಗೆ 2 ಲಕ್ಷ ರಾಸುಗಳು ಚರ್ಮಗಂಟು ರೋಗದಿಂದ ಬಳಲುತ್ತಿದ್ದು, ಈ ಪೈಕಿ 1.50 ಲಕ್ಷ ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ಜಾನುವಾರುಗಳ ಮಾಲಕರಿಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಧನ ವಿತರಣೆ ಮಾಡಲಾಗುತ್ತಿದೆ ಎಂದು ಪ್ರಭು ಚವ್ಹಾಣ್ ಮಾಹಿತಿ ನೀಡಿದ್ದಾರೆ.

Also Read  (ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಸ್ಟೇಷನ್ ಕಂಟ್ರೋಲರ್ /ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಮೇ 16,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 82,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. *ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಹುದ್ದೆಗಳಿಗೆ ಅರ್ಜಿ ಆಹ್ವಾನ.!*

ಚರ್ಮಗಂಟು ರೋಗ ಕಾಣಿಸಿಕೊಂಡ ಜಾನುವಾರುಗಳ ಆರೋಗ್ಯ ಸಮಸ್ಯೆ ಹೊತ್ತು ಬರುವ ರೈತರು ಹಾಗೂ ದೂರವಾಣಿ ಕರೆಗಳಿಗೆ ಕೂಡಲೇ ಸ್ಪಂದಿಸಿ, ಸೂಕ್ತ ಚಿಕಿತ್ಸೆ ನೀಡಿ, ರೋಗ ಹರಡದಂತೆ ಪಶು ವೈದ್ಯಾಧಿಕಾರಿಗಳು ಮತ್ತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಶ್ರಮಿಸುವಂತೆ ಸೂಚನೆ ನೀಡಿದ್ದಾರೆ. ಜನರಿಗೆ ಆರೋಗ್ಯ ಸಮಸ್ಯೆ ಎದುರಾದರೆ ತಮ್ಮ ನೋವನ್ನು ತೋಡಿಕೊಳ್ಳುತ್ತಾರೆ. ಮಾತು ಬಾರದ ಮೂಕ ಪ್ರಾಣಿಗಳು ತಮ್ಮ ನೋವನ್ನು ಹೇಗೆ ವ್ಯಕ್ತಪಡಿಸುತ್ತವೆ ಎನ್ನುವುದನ್ನು ನಿರ್ಲಕ್ಷ್ಯ ಮಾಡದೇ ಕೂಡಲೇ ಜಾನುವಾರುಗಳ ಚಿಕಿತ್ಸೆ ಧಾವಿಸಿ, ಗೋಮಾತೆ ಸಂರಕ್ಷಿಸೋಣ ಎಂದು ಸಚಿವ ಪ್ರಭು ಚವ್ಹಾಣ್ ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Also Read  ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ'ಗಿಣಿ'

error: Content is protected !!
Scroll to Top