ಪಾದಚಾರಿಗೆ ಟಿಪ್ಪರ್ ಢಿಕ್ಕಿ ➤ ಆಲಂಕಾರು ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಪೆರ್ಡೂರು, ಡಿ. 14. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ದರೋರ್ವರಿಗೆ ಟಿಪ್ಪರ್ ಢಿಕ್ಕಿ ಹೊಡೆದು, ವೃದ್ದ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರ್ಡೂರಿನಲ್ಲಿ ನಡೆದಿದೆ.


ಮೃತರನ್ನು ಆಲಂಕಾರು ನಿವಾಸಿ ಮಂಜಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪೆರ್ಡೂರಿನಿಂದ ಬರುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಂಜಯ್ಯ ಶೆಟ್ಟಿ ಅವರ ತಲೆಯ ಮೇಲೆ ಟಿಪ್ಪರ್ ನ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದ ಬಳಿಕ ಚಾಲಕ ಟಿಪ್ಪರ್ ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Also Read  ಕಡಬ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

error: Content is protected !!
Scroll to Top