ಕಾಡಾನೆ ದಾಳಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಹನೂರು, ಡಿ. 15. ಕಾಡಾನೆ ದಾಳಿಯಿಂದಾಗಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಮಹದೇಶ್ವರಬೆಟ್ಟದಲ್ಲಿ ಸಂಭವಿಸಿದೆ.

ಗಾಯಗೊಂಡವರನ್ನು ಪುಟ್ಟಸ್ವಾಮಿ (40) ಎಂದು ಗುರುತಿಸಲಾಗಿದೆ. ಇವರು ಮಹದೇಶ್ವರ ಬೆಟ್ಟದಿಂದ ಕೊಕ್ಕಬೋರೆ ಗ್ರಾಮದಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಆನೆ ದಾಳಿ ನಡೆಸಿದ್ದು, ಪರಿಣಾಮ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

error: Content is protected !!
Scroll to Top