ಪ್ರವಾಸಿ ಸ್ವಯಂ ಉದ್ಯೋಗ ಯೋಜನೆಗೆ (ಕೇರಳ ಮಾದರಿ) ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14.  ಗಲ್ಫ್  ರಾಷ್ಟ್ರಗಳಲ್ಲಿ ಉದ್ಯೋಗಕ್ಕೆ ತೆರಳಿ  ನಂತರ ಹಿಂತಿರುಗಿ ಬರುವ ಉದ್ಯೋಗಾವಕಾಶ ವಂಚಿತರಾದ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಹಾಗೂ ಆರ್ಥಿಕ ಸ್ಥಿತಿ ಉತ್ತಮ ಪಡಿಸಲು ರೂ. 10 ಲಕ್ಷಗಳ ಸಾಲವನ್ನು ಶೇ. 5 ರ ಬಡ್ಡಿ ದರದಲ್ಲಿ ಕೊಲೈಟರಲ್ ಭದ್ರತೆಯೊಂದಿಗೆ ನಿಗಮದಿಂದ ಸಾಲ ಸೌಲಭ್ಯ ನೀಡಲಾಗುವುದು. ನಿಗಮದಿಂದ ನೀಡಲಾಗಿರುವ ಸಾಲವನ್ನು 7 ವರ್ಷಗಳೊಳಗೆ ಮರುಪಾವತಿಸತಕ್ಕದ್ದು. ಒಮ್ಮೆ ಸಾಲ ಪಡೆದ ಫಲಾನುಭವಿಗಳು ಪುನಃ ಸಾಲ ಪಡೆಯಲು ಅವಕಾಶ ಇರುವುದಿಲ್ಲ. ಒಂದು ಮನೆಯ ಒಬ್ಬರಿಗೆ ಮಾತ್ರ ಅವಕಾಶ

        ಆಸಕ್ತ ಫಲಾಪೇಕ್ಷಿಗಳು ನಿಗದಿತ ಅರ್ಜಿಗಳನ್ನು ಹಾಗೂ ಹೆಚ್ಚುವರಿ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಝಾದ್ ಅಲ್ಪಸಂಖ್ಯಾತರ ಭವನ, ಓಲ್ಡ್ ಕೆಂಟ್ ರೋಡ್, ಪಾಂಡೇಶ್ವರ, ಮಂಗಳೂರು 575001 ರವರಿಂದ ಪಡೆಯಬಹುದು. ಅಥವಾ ವೆಬ್‍ಸೆಟ್ www.kmdc.kar.nic.in ನಿಂದ ಅಥವಾ ಕಚೇರಿ ದೂರವಾಣಿ ಸಂಖ್ಯೆ 0824 – 2429044 ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
error: Content is protected !!

Join the Group

Join WhatsApp Group