ಕಳಪೆ ರಸ್ತೆಯಿಂದ ಸಾವು-ನೋವು ಸಂಭವಿಸಿದರೆ ಪೊಲೀಸ್ ಠಾಣೆಗೆ ದೂರು ನೀಡಿ ➤ ಹೈಕೋರ್ಟ್ ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ಈ ವರ್ಷ ಹೊಂಡ-ಗುಂಡಿ ಬಿದ್ದ ರಸ್ತೆಗಳಲ್ಲಿ ಆಗಿರುವ ಗಂಡಾಂತರಗಳು ಒಂದೆರಡಲ್ಲ. ಈ ಸಂಧರ್ಭಗಳಲ್ಲಿ ಜನಪ್ರತಿನಿಧಿಗಳು ಏನು ಮಾಡುತ್ತಾರೆ. ಮಹಾನಗರ ಪಾಲಿಕೆ ಸರಿಯಾಗಿ ಕೆಲಸ ಮಾಡಿಸುತ್ತಿಲ್ಲ. ಗುತ್ತಿಗೆದಾರರು ಕೇವಲ ಹಣ ಮಾಡಲು ನೋಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿರುತ್ತದೆ.

 

ಆದುದರಿಂದ ಗುಂಡಿಗಳು ಮತ್ತು ರಸ್ತೆಗಳ ದುಸ್ಥಿತಿಯಿಂದಾಗಿ ಜನರು ಗಂಭೀರ ಗಾಯಗೊಂಡರೆ ಅಥವಾ ಸಾವು ಸಂಭವಿಸುವುದನ್ನು ಗಂಭೀರವಾಗಿ ಪರಿಗಣಿಸುವ ಹೈಕೋರ್ಟ್, ಈ ಕುರಿತು ಯಾವುದೇ ನಾಗರಿಕರು ವ್ಯಾಪ್ತಿಯ ಪೋಲೀಸ್ ಠಾಣೆಯನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಲು ಮುಂದಾದರೆ ಪೊಲೀಸ್ ಠಾಣೆ ಕಡ್ಡಾಯವಾಗಿ ದೂರು ದಾಖಲಿಸಿಕೊಳ್ಳಿ ಎಂದು ಆದೇಶ ನೀಡಿದೆ.

error: Content is protected !!
Scroll to Top