ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಡಿ. 17. ವೇಗವಾಗಿ ಬಂದ ಲಾರಿಯೊಂದು ತಿರುವಿನಲ್ಲಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿ, ಬೆಜ್ಜರಹಳ್ಳಿ ಕಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ.

ಮೃತಪಟ್ಟವರನ್ನು ಸುಗ್ಗನಹಳ್ಳಿ ಗ್ರಾಮದ ನಿವಾಸಿ ಮಲ್ಲೇಶಯ್ಯ (52) ಎಂದು ಗುರುತಿಸಲಾಗಿದೆ. ಇವರು ಕೆಲಸದ ನಿಮಿತ್ತ ಮಾಗಡಿಗೆ ತೆರಳುವ ವೇಳೆ ಎಂದಿನಂತೆ ತಮ್ಮ ಮಗಳನ್ನು ಬೆಜ್ಜರಹಳ್ಳಿ ಕಟ್ಟೆ ಗ್ರಾಮದ ಬಳಿ ಡ್ರಾಪ್ ಮಾಡಲು ಮಲ್ಲೇಶಯ್ಯ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Also Read  ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ

error: Content is protected !!
Scroll to Top