ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಡಿ. 17. ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ.

ಮೃತರನ್ನು ದುರ್ಗಮ್ಮ (25), ಆಕೆಯ ಮಗ ಅಜ್ಜಯ್ಯ (6) ಹಾಗೂ ಮಗಳು ಸೇವಂತಿ (4) ಎಂದು ಗುರುತಿಸಲಾಗಿದೆ. ಬೋಸೇದೇವರಹಟ್ಟಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಪತಿ ಮಹಾಂತೇಶ ಕರೆತಂದು ಬಳಿಕ ಗಂಗಾ ಪೂಜೆಗೆಂದು ನಾಯಕನಹಟ್ಟಿ ಹಿರೇಕೆರೆಗೆ ಮಹಾಂತೇಶ ಕರೆದುಕೊಂಡು ಹೋಗಿದ್ದ. ಆಗ ಪತ್ನಿ ಮತ್ತು ಮಕ್ಕಳನ್ನು ಕೆರೆ ತಳ್ಳಿಗೆ ಪತಿಯೇ ಕೊಂದಿರುವುದಾಗಿ ಶಂಕಿಸಲಾಗಿದೆ. ಪತಿ ಮಹಾಂತೇಶನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ವಿಡಿಯೋ ಮೂಲಕ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಆರ್‌ಸಿಬಿ ತಂಡ

error: Content is protected !!
Scroll to Top