ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಚಾಮರಾಜನಗರ , ಡಿ 18 : ಯಳಂದೂರು ತಾಲ್ಲೂಕಿನ ದೇವರಹಳ್ಳಿಯ ಮನೆಯೊಂದರಲ್ಲಿ ಅಕ್ರಮವಾಗಿ ಒಣ ಗಾಂಜಾ ಸಂಗ್ರಹಿಸಿಟ್ಟಿದ್ದ ಮಾದೇಗೌಡ ಎಂಬುವವರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಬಳಿಯಿಂದ 0.180 ಗ್ರಾಂನಷ್ಟು ಒಣ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಸಿಬ್ಬಂದಿ ಮನೆಗೆ ದಾಳಿ ನಡೆಸಿದ್ದರು ಎನ್ನಲಾಗಿದೆ.

Scroll to Top