➤ ಬೆಂಗಳೂರು ಸಾರಿಗೆ ಬಸ್ ಡಿಕ್ಕಿ ➤ ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬಳ್ಳಾರಿ , ಡಿ. 19  ಬಳ್ಳಾರಿ: ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಸಂಭವಿಸಿದೆ. ಕನಕರಾಜು(19), ಶಂಕರ(18),  ಹೊನ್ನೂರ(22) ಮೃತ ದುರ್ದೈವಿಗಳು.

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ರಸ್ತೆ ಕ್ರಾಸ್ ಮಾಡುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಎಸ್​​​ಸಿ, ಎಸ್​​ಟಿ ಹಾಸ್ಟಲ್ ವಿದ್ಯಾರ್ಥಿಗಳು. ಇವರು 2 ದಿನದ ಹಿಂದೆ ಹಾಸ್ಟಲ್​ ಬಿಟ್ಟು ಹೋಗಿದ್ದರು. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳು ಮಧ್ಯರಾತ್ರಿ ಹಲಕುಂದಿ ಬಳಿ ಯಾಕೆ ಹೋಗಿದ್ದರು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್

error: Content is protected !!
Scroll to Top