ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು

(ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.19  ನಗರದ ಗರೋಡಿಯಲ್ಲಿ ಇತ್ತೀಚೆಗೆ ನಡೆದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ದುರಸ್ತಿಗೊಳಿಸಲು ‘ ಗುರು ಬೆಳದಿಂಗಳು ಫೌಂಡೇಷನ್ ‘ ಮುಂದಾಗಿದೆ ಎನ್ನಲಾಗಿದೆ.

ಗುರುಬೆಳದಿಂಗಳು ಫೌಂಡೇಷನ್ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಜಿ ಪದ್ಮರಾಜ್ ಆರ್.ಅವರು, ಘಟನೆ ಮರುದಿನ ಆಸ್ಪತ್ರೆಗೆ ಭೇಟಿ ನೀಡಿ , ಪುರುಷೋತ್ತಮ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆಂದು ವರದಿ ತಿಳಿಸಿದೆ.

ಎಂಜಿನಿಯರ್ ದೀವರಾಜ್ ಜೊತೆ ಪುರುಷೋತ್ತಮ ಪೂಜಾರಿ ಅವರ ಮನೆಗೆ ಪದ್ಮರಾಜ್ ನೀಡಿ, ಅವರ ಕುಟುಂಬ ಸದಸ್ಯರ ಜೊತೆ ಮನೆ ನವೀಕರಣದ ಕುರಿತು ಚರ್ಚಿಸಿದರು ಎಂದು ತಿಳಿದುಬಂದಿದೆ.

Also Read  ಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಹತ್ಯೆ    ➤ ಆರೋಪಿಯ ಬಂಧನ

 

error: Content is protected !!
Scroll to Top