ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.19  ವರ್ತೂರು ಕೆರೆ ಸೇತುವೆ ಮೇಲೆ ನಿಲ್ಲುತ್ತಿರುವ ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೇರುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ.

ಲೀಟೆಜ್ ಒಂದು ದ್ರವವಾಗಿದ್ದು ಕಸದ ವಸ್ತುಗಳಿಂದ ಸಂಗ್ರಹಗೊಂಡು ಹಾನಿಕಾರಕ ದ್ರವ ಅಥವಾ ವಿಷಕಾರಿ ದ್ರವವಾಗಿ ಮಾರ್ಪಾಡುತ್ತದೆ  ಎಂದು ತಿಳಿದುಬಂದಿದೆ.

ವಿಷಕಾರಿ ದ್ರವ ಕೆರೆ ನೀರಿಗೆ ಸೇರುತ್ತಿರುವ ಸಂಬಂಧ ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ವರದಿ ತಿಳಿಸಿದೆ.

 

 

Scroll to Top