ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.20  ಮಂಗಳೂರು ವಿವಿ ಫಲಿತಾಂಶ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ಮಂಗಳೂರು ವಿವಿಯಲ್ಲಿ ಸಂಭವಿಸಿದೆ.

ಈ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ವಾಗ್ವಾದ ನಡೆಯಿತು ಎನ್ನಲಾಗಿದೆ.

ಮಂಗಳೂರಿನ ಕೊಣಾಜೆಯ ಮಂಗಳೂರು ವಿವಿ ಯ ಆಡಳಿತ ಸೌಧಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು ಎಂದು ತಿಳಿದುಬಂದಿದೆ.

ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾರದೇ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು ಎನ್ನಲಾಯಿತು.

Also Read  ಕೆನರಾ ಎಂಜಿನಿಯರಿಂಗ್ ಕಾಲೇಜಿನ ರವೀಂದ್ರ ಮಲ್ಯರಿಗೆ ಡಾಕ್ಟರೇಟ್ ಪದವಿ

 

 

error: Content is protected !!
Scroll to Top