ಚಾಮರಾಜನಗರ: ಬಿ.ಆರ್.ಟಿ ಅರಣ್ಯ ಪ್ರದೇಶದಲ್ಲಿ ಹುಲಿ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 21. 5 ವರ್ಷ ಪ್ರಾಯದ ಹುಲಿ ಕಾದಾಟದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದ ಬಿ ಆರ್ ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಕಗ್ಗಲಿಗುಂಡಿ ಎಂಬಲ್ಲಿ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ಬಂದು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಎನ್ನಲಾಗಿದೆ. ಕಗ್ಗಲಿಗುಂಡಿ ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದೆ. ಸ್ಥಳದಲ್ಲಿ ಹುಲಿಗಳ ಹೆಜ್ಜೆ ಗುರುತು ಹೆಚ್ಚು ಪತ್ತೆಯಾಗಿದೆ. ಹಾಗಾಗಿ ಹುಲಿಗಳ ಕಾದಾಟದಲ್ಲಿ ಹುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

Also Read  ರೈಲು ಢಿಕ್ಕಿ- 90 ಕುರಿಗಳು ಹಾಗೂ 8 ರಣಹದ್ದುಗಳು ಸಾವು         

error: Content is protected !!
Scroll to Top