(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಡಿ.21. ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕಾಡೂರು ತಂತ್ರಾಡಿ ನಿವಾಸಿ ವಿಜಯ್ ಕುಮಾರ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಈತ ಹೊಂಡಾ ಮ್ಯಾಟ್ರಿಕ್ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಡೆದು ಪರಿಶೀಲನೆ ನಡೆಸಿದಾಗ ಕಳ್ಳತನ ನಡೆಸಲು ಬೇಕಾದ ಸಲಕರಣೆಗಳು ಆತನ ಜೊತೆಯಿದ್ದು, ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ













