ಯುವಕನ ಬರ್ಬರ ಕೊಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಯುವಕನೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಗಡೆನಗರದ ಬಾಲಾಜಿ ಲೇಔಟ್ ಬಳಿ ಸಂಭವಿಸಿದೆ.

ಕೊಲೆಯಾದ ಯುವಕನನ್ನು ಹೆಗಡೆನಗರ ನಿವಾಸಿ ಸಲ್ಮಾನ್ (17) ಎಂದು ಗುರುತಿಸಲಾಗಿದೆ. ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ, ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂದ ಹಂತಕರು ಯುವಕನನ್ನು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Also Read  ಪಂಜ: ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ಧಿವಿನಾಯಕ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನ

error: Content is protected !!
Scroll to Top