ಸಂವಿಧಾನವನ್ನು ತಿದ್ದುಪಡಿ ಮಾಡುವ ಬಗ್ಗೆ ಹೇಳಿಕೆಯ ಆರೋಪ ► ಪೇಜಾವರ ಶ್ರೀಗಳ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.26. ಶನಿವಾರ ಉಡುಪಿಯಲ್ಲಿ ನಡೆದ ಧರ್ಮಸಂಸದ್ ನಲ್ಲಿ ಭಾರತೀಯ ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಮಾಡಿದ್ದಲ್ಲ ಎನ್ನುವ ಹೇಳಿಕೆ ನೀಡಿದ ಆರೋಪದಲ್ಲಿ ಉಡುಪಿ ಪೇಜಾವರಶ್ರೀ ವಿರುದ್ಧ ನಗರದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೇಜಾವರ ಶ್ರೀಯವರು ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಮಾಡಿದ್ದಲ್ಲ, ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗೆ ಒಂದು ಕಾನೂನು, ಬಹುಸಂಖ್ಯಾತರಿಗೆ ಒಂದು ಕಾನೂನಿದೆ. ಅದ್ದರಿಂದ ಸಂವಿಧಾನವನ್ನು ತಿದ್ದುಪಡಿ ಮಾಡಿದ್ರೆ ತಪ್ಪೇನಿಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿ ಇದೀಗ ಬೆಂಗಳೂರು ಸ್ನಾತಕೋತ್ತರ ವಿವಿ ವಿದ್ಯಾರ್ಥಿಗಳು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

error: Content is protected !!

Join the Group

Join WhatsApp Group