ಉಡುಪಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

crime, arrest, suspected

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸರಕಾರಿ ನೌಕರನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.

 

ಲೋಕಾಯುಕ್ತ ಬಲೆಗೆ ಬಿದ್ದ ಸರಕಾರಿ ನೌಕರನನ್ನು ಪೆರ್ಣಂಕಿಲ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಎಂದು ಗುರುತಿಸಲಾಗಿದೆ. ಇವರು ವ್ಯಕ್ತಿಯೊಬ್ಬರಿಗೆ ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ 10 ಸಾವಿರ ರೂ. ಲಂಚ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರುದಾರ 10 ಸಾವಿರ ರೂ. ನೀಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು, ಗ್ರಾಮ ಲೆಕ್ಕಿಗ ಹರೀಶ್ ನನ್ನು ದಸ್ತಗಿರಿ ಮಾಡಿದ್ದಾರೆ.

Also Read  ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ

error: Content is protected !!
Scroll to Top