ಕರ್ತವ್ಯದಲ್ಲಿ ಲೋಪ  ➤ ಹಿರಿಯ ಐಪಿಎಸ್ ಅಧಿಕಾರಿ ಅಮಾನತು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಕರ್ತವ್ಯಲೋಪ ಆರೋಪದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಜೈಲಿನ ಮಾಜಿ ಮಹಾನಿರ್ದೇಶಕ ಸಂದೀಪ್ ಗೋಯೆಲ್ ಅವರನ್ನು ಕೇಂದ್ರ ಗೃಹ ಸಚಿವಾಲಯ ಅಮಾನತುಗೊಳಿಸಿದೆ.

ಸಂದೀಪ್ ಅವರನ್ನು ಕಳೆದ ತಿಂಗಳು ತಿಹಾರ್ ಜೈಲಿನ ಮಹಾನಿರ್ದೇಶಕ ಸ್ಥಾನದಿಂದ ತೆರವುಗೊಳಿಸಿ ದೆಹಲಿಯ ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾಯಿಸಲಾಗಿತ್ತು. ಕರ್ತವ್ಯದಲ್ಲಿ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಗೃಹಸಚಿವರು ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

 

 

 

 

Scroll to Top