ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಮೃತ್ಯು 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ಸಂಭವಿಸಿದೆ.

ಉಡೇವಾ ಗ್ರಾಮದ ಶಂಕರ್ ಎಂಬುವರಿಗೆ ಸೇರಿದ ಎತ್ತುಗಳಾಗಿದ್ದು, ಆರೋಗ್ಯ ಸರಿಇಲ್ಲವೆಂದು ಎತ್ತುಗಳನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಶುವೈದ್ಯ ಬಸವರಾಜ್ ಎಂಬಾತ ಎತ್ತುಗಳಿಗೆ ಇಂಜೆಕ್ಷನ್ ನೀಡಿದ್ದಾನೆ. ಇನ್ನು ವೈದ್ಯರು ಇಂಜೆಕ್ಷನ್ ನೀಡಿದ ಮರುದಿನವೇ ರಾಸುಗಳು ಮೃತಪಟ್ಟಿವೆ ಎನ್ನಲಾಗಿದೆ.

Also Read  ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ

error: Content is protected !!
Scroll to Top