ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 24. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು, ಇಬ್ಬರು ಆರೋಪಿಗಳ ಸಹಿತ 4 ಗೋವು ಹಾಗೂ ಹೆಚ್ಚಿನ ಪ್ರಮಾಣದ ಮಾಂಸ ವಶಪಡಿಸಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಆಲಂಗಾರು ಎಂಬಲ್ಲಿ ನಡೆದಿದೆ.

ಬಂಧಿತರನ್ನು ಗಿಲ್ಬರ್ಟ್ ಮಿರಾಂದ ಹಾಗೂ ಕ್ಲಾರಿನ್ ಆಲ್ವಿನ್ ಎಂದು ಗುರುತಿಸಲಾಗಿದೆ. ಆಲಂಗಾರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವರ ಅಕ್ರಮ ಕಸಾಯಿ ಖಾನೆಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಮೂಡಬಿದ್ರೆ ಪೊಲೀಸರಿಗೆ ಹಸ್ತಾಂತರಿಸಿರುವುದಾಗಿ ತಿಳಿದುಬಂದಿದೆ.

Also Read  ಸಚಿವ ಎಸ್. ಅಂಗಾರಗೆ ಅನಾರೋಗ್ಯ    ➤ ಮಂಗಳೂರು ಆಸ್ಪತ್ರೆಗೆ ದಾಖಲು

error: Content is protected !!
Scroll to Top