ಉಳ್ಳಾಲ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 25. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು 25,000 ರೂ. ಬೆಲೆಬಾಳುವ 100 ಕೆ.ಜಿ ದನದ ಮಾಂಸವನ್ನು ವಶಕ್ಕೆ ಪಡೆದಿರುವ ಘಟನೆ ಪಾವೂರು ಗ್ರಾಮದ ಮಲಾರ್ ಎಂಬಲ್ಲಿ ನಡೆದಿದೆ.


ಮಲಾರ್ ಬದ್ರಿಯಾನಗರ ನಿವಾಸಿ ಜಾಫರ್ ಸಾದಿಕ್ ಎಂಬಾತ ತನ್ನ ಮನೆಯಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ನಡೆಸಲು ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿ, ಸುಮಾರು 25,000/- ರೂಪಾಯಿ ಅಂದಾಜು ಮೌಲ್ಯದ 100 ಕೆ.ಜಿ ತೂಕದ ದನದ ಮಾಂಸವನ್ನು ಮತ್ತು ತೂಕದ ಮಾಪಕವನ್ನು ವಶಪಡಿಸಿಕೊಂಡಿದ್ದಾರೆ.

Also Read  ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ಆತ್ಮಹತ್ಯೆ

error: Content is protected !!
Scroll to Top