ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ   ➤ ಯುವಕ ಮೃತ್ಯು                                

Death, deadbody, Waterfall

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ಪಾದಚಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಸಂಭವಿಸಿದೆ.

ಮೃತಪಟ್ಟ ಯುವಕನನ್ನು ರಾಜಾಜಿನಗರ ಸಮೀಪದ ಪ್ರಕಾಶ್ ನಗರದ ನಿವಾಸಿ ಅಲೆಕ್ಸ್ ತಂಬಿರಾಜ್ ಎಂದು ಗುರುತಿಸಲಾಗಿದೆ. ಈತ ಕಾರ್ಖಾನೆಯೊಂದರಲ್ಲಿ ಸಿಎನ್ ಸಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  ಘಟನೆಯಲ್ಲಿ ಅಲೆಕ್ಸ್ ಅವರ ಸ್ನೇಹಿತನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರಿಸ್ ಮಸ್ ಹಿನ್ನೆಲೆ ಪ್ರಾರ್ಥನೆ ಸಲ್ಲಿಸಲು ಅಲೆಕ್ಸ್ ಹಾಗೂ ಸತೀಶ್ ಚರ್ಚ್ ಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  'ಬಿಜೆಪಿ ಮುಕ್ತ ಭಾರತ' ಕರ್ನಾಟಕದಿಂದಲೇ ಆರಂಭ: ಸಿಎಂ ಸಿದ್ದರಾಮಯ್ಯ

 

 

error: Content is protected !!
Scroll to Top