ಕಾಸರಗೋಡು: ಒಳ ಉಡುಪಿನಲ್ಲಿಟ್ಟು ಚಿನ್ನ ಸಾಗಾಟ ➤ ಯುವತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 26. ಒಳ ಉಡುಪಿನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಬಂಧಿತ ಯುವತಿಯನ್ನು ಕಾಸರಗೋಡಿನ ಶಹಲಾ (19) ಎಂದು ಗುರುತಿಸಲಾಗಿದೆ. ಈಕೆ ಭಾನುವಾರದಂದು ರಾತ್ರಿ ದುಬೈಯಿಂದ ಬಂದು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈಕೆಯನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ಹಲವು ಸಮಯ ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ ನೀಡಲಿಲ್ಲ. ಲಗೇಜ್ ತಪಾಸಣೆ ನಡೆಸಿದಾಗಲೂ ಚಿನ್ನಾಭರಣ ಪತ್ತೆಯಾಗಲಿಲ್ಲ. ಕೊನೆಗೆ ದೇಹ ತಪಾಸಣೆ ನಡೆಸಿದಾಗ 1.884 ಕಿಲೋ ಚಿನ್ನಾಭರಣವನ್ನು ಮೂರು ಪ್ಯಾಕೆಟ್ ಗಳಾಗಿ ಮಾಡಿ ಒಳ ಉಡುಪಿನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.

 

Scroll to Top