ಕುಂದಾಪುರ : ಬೈಕ್ ಗೆ ಕ್ರೇನ್ ಢಿಕ್ಕಿ ➤ ಸಹಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕುಂದಾಪುರ , ಡಿ 27 :  ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕ್ರೇನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ  ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾದಕದಕಟ್ಟೆ ಎಂಬಲ್ಲಿ ವರದಿಯಾಗಿದೆ.

ಮೃತರನ್ನು ಕುಂದಾಪುರ ತಾಲೂಕಿನ ಹುಣ್ಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಎಂದು ಗುರುತಿಸಲಾಗಿದೆ.

ಪ್ರಶಾಂತ್ ಅವರು ದಿನೇಶ್ ಪೂಜಾರಿ ಎಂಬವರ ಬೈಕ್ ನಲ್ಲಿ  ಹಿಂಬದಿ ಕುಳಿತು ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ ನೋಂದಣಿ ಸಂಖ್ಯೆ ಇಲ್ಲದ ಹೊಸ ಕ್ರೇನ್ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

Scroll to Top