ಬಂಟ್ವಾಳ: ಅಯ್ಯಪ್ಪ ಮಾಲಾಧಾರಿಗೆ ನಿಂದನೆ ಆರೋಪ ➤ ಮೀನು ವ್ಯಾಪಾರಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 28. ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ ಘಟಬೆ ವರದಿಯಾಗಿದೆ‌.


ಬಂಧಿತ ಆರೋಪಿಯನ್ನು ಗೂಡಿನಬಳಿ ನಿವಾಸಿ ಮೀನು ವ್ಯಾಪಾರಿ ಇಕ್ಬಾಲ್ ಎಂದು ಗರುತುಸಲಾಗಿದೆ. ಯಶ್ವಿತ್ ಎಂಬಾತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಸ್ನೇಹಿತನ ಜೊತೆ ಟಂಪೋದಲ್ಲಿ ಪಾರ್ಸೆಲ್ ಸರ್ವಿಸ್ ಮಾಡುತ್ತಿದ್ದ ಸಂದರ್ಭ ಆರೋಪಿ ಇಕ್ಬಾಲ್, ಇದು ನಮ್ಮ ಏರಿಯಾ. ಈ ಭಾಗಕ್ಕೆ ಹಿಂದೂಗಳು ಬರಬಾರದು ಎಂದಿದ್ದಲ್ಲದೇ ಅಯ್ಯಪ್ಪ ವೃತಧಾರಿಗಳ ಬಗ್ಗೆ ನಿಂದಿಸಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ‌. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್

error: Content is protected !!
Scroll to Top