ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಕೃಷಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಗಾಯಗೊಂಡವರನ್ನು ಆಶಾಎಂದು ಗುರುತಿಸಲಾಗಿದೆ. ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ್ ಮತ್ತು ಸುಂದರರವರು ಅಕ್ರಮವಾಗಿ ತಂತಿ ಬೀಲಿ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!!

 

error: Content is protected !!
Scroll to Top