ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಸರಕಾರವು ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿ ರಂಗನ್, ಗಾಡ್ಗಿಲ್ ವರದಿ, ವೈಲ್ಡ್ ಲೈಫ್, ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗಳ ವಿರೋಧಿಸಿ ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಕಡಬ ತಾಲೂಕು ವ್ಯಾಪ್ತಿಯ ಬಲ್ಯ, ಕೌಕ್ರಾಡಿ, ಶಿರಾಡಿ, ಶಿಬಾಜೆ, ಕೊಂಬಾರು, ಬಿಳಿನೆಲೆ, ಸುಬ್ರಹ್ಮಣ್ಯ, ಐನೆಕಿದು, ಹರಿಹರ, ಕೊಲ್ಲಮೊಗ್ರು, ಏನೆಕಲ್, ಬಳ್ಪ, ಕೂತ್ಕುಂಜ ಸೇರಿದಂತೆ ಹಲವು ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿಸಲಾಗಿದೆ ಮತ್ತು ಗಾಡ್ಗಿಲ್ ವರದಿಯಲ್ಲಿ ನೋಟಿಫಿಕೇಶನ್ ಮಾಡಲಾಗಿದೆ. ಇದರಿಂದಾಗಿ ಈ ಭಾಗದಲ್ಲಿ ವಾಸಿಸುವಂತಹ ಸಾವಿರಾರು ಕುಟುಂಬಗಳು ಬೀದಿಪಾಲಾಗುವ ಪರಿಸ್ಥಿತಿ ತಲೆದೋರಿದೆ. ಇದೀಗ ಅಂತಿಮ ಗಜೆಟ್ ನೋಟಿಫಿಕೇಶನ್ ಮಾಡಲಾಗಿದ್ದು, ಅದನ್ನು ತಡೆಹಿಡಿಯಬೇಕೆಂದು ಆಗ್ರಹಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

Also Read  ಆಲಂಕಾರು ಶಾಲಾ ಶತಮಾನೋತ್ಸವಕ್ಕೆ ಹಿರಿಯ ವಿದ್ಯಾರ್ಥಿಗಳ ಧನ ಸಹಾಯ

ಪ್ರತಿಭಟನೆಯಲ್ಲಿ ಕಡಬ ತಾಲೂಕು ಜಾತ್ಯಾತೀತ ಜನತಾದಳ ಅಧ್ಯಕ್ಷ ಸೈಯದ್ ಮೀರಾ ಸಾಹೇಬ್, ಕಡಬ ತಾಲೂಕು ರೈತ ಸಂಘದ ಅಧ್ಯಕ್ಷ ವಿಕ್ಟರ್ ಮಾರ್ಟಿಸ್, ಚಂದ್ರಶೇಖರ ಗೌಡ ಕೋಡಿಬೈಲು, ಗುರುವಪ್ಪ ಕಲ್ಲುಗುಡ್ಡೆ ಮೊದಲಾದವರು ಪಾಲ್ಗೊಂಡಿದ್ದರು.

error: Content is protected !!