ಉಳ್ಳಾಲ: ಸೆಕ್ಯೂರಿಟಿ ಗಾರ್ಡ್ ಮೃತದೇಹ ಚರಂಡಿಯಲ್ಲಿ ಪತ್ತೆ 



(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 31. ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯ ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ.







ಮೃತರನ್ನು ಗಣೇಶ್ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಏಜೆನ್ಸಿ ಮೂಲಕ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಡಿ.27 ರಿಂದ ಕರ್ತವ್ಯಕ್ಕೆ ಹಾಜರಾಗದೆ ಇದ್ದು, ನಸುಕಿನ ಜಾವ ಕುತ್ತಾರು ಜಂಕ್ಷನ್ ನಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ದೇರಳಕಟ್ಟೆಯ ಬೆಳ್ಮಭಾಗದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದು, ಪತ್ನಿ ಸರಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿ ತಿಳಿಸಿದೆ.






 

error: Content is protected !!
Scroll to Top