ಗೇರುಕಟ್ಟೆ: ಪೂರ್ವದ್ವೇಷದ ಹಿನ್ನಲೆ ► ಮೂವರಿಗೆ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.04. ತಂಡವೊಂದು ಯುವಕರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪರಿಣಾಮ ಮೂವರು ಯುವಕರು ಗಾಯಗೊಂಡ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಗೇರುಕಟ್ಟೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಗಾಯಾಳುಗಳನ್ನು ಗೇರುಕಟ್ಟೆ ನಿವಾಸಿಗಳಾದ ತಸ್ಲೀಂ, ಅವರ ಸಹೋದರ ಹಾರಿಸ್ ಹಾಗೂ ಶಿಹಾಬ್ ಎಂದು ಗುರುತಿಸಲಾಗಿದ್ದು, ಇವರು ಸೋಮವಾರ ರಾತ್ರಿ ಗೇರುಕಟ್ಟೆ ಬಸ್ ತಂಗುದಾಣದ ಸಮೀಪದ ಅಂಗಡಿಯೊಂದರಲ್ಲಿ ಕುಳಿತಿದ್ದರೆನ್ನಲಾಗಿದೆ. ಅಲ್ಲಿಗೆ ಬಂದ ಸ್ಥಳೀಯ ನಿವಾಸಿಗಳಾದ ಯಾಕುಬ್, ಉಮರಬ್ಬ, ರವೂಫ್ ಹಾಗೂ ಇತರರ ತಂಡವೊಂದು ಮೂವರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆಯೆನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Also Read  ನಾಳೆ (ಮೇ.26) ಕಡಬದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ

error: Content is protected !!
Scroll to Top