ಕೆಮ್ಮಿನ ಸಿರಪ್ ನಿಂದ ಮಕ್ಕಳ ಮೃತ್ಯು   ➤ ಮ್ಯಾರಿಯೊನ್‌ ಬಯೊಟೆಕ್‌ ಸಂಸ್ಥೆಯ ಅಮಾನತು 



(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 31. ಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡದ ಮ್ಯಾರಿಯೊನ್‌ ಬಯೊಟೆಕ್‌ ಸಂಸ್ಥೆಯ ಸದಸ್ಯತ್ವವನ್ನು ಭಾರತೀಯ ಔಷಧ ರಫ್ತು ಉತ್ತೇಜನ ಮಂಡಳಿ (ಫಾರ್ಮ್‌ಎಕ್ಸಿಲ್‌) ಅಮಾನತು ಮಾಡಿದೆ ಎಂದು ತಿಳಿದುಬಂದಿದೆ.







ಭಾರತೀಯ ಔಷಧ ರಫ್ತು ಉತ್ತೇಜನ ಮಂಡಳಿ (ಫಾರ್ಮ್‌ಎಕ್ಸಿಲ್‌) ಮ್ಯಾರಿಯೊನ್ ಬಯೊಟೆಕ್‌ ನ ಸದಸ್ಯತ್ವವನ್ನು ಅಮಾನತಿನಲ್ಲಿರಿಸಿದೆ. ಮ್ಯಾರಿಯೊನ್‌ ಬಯೊಟೆಕ್‌ ನ ಔಷಧ ನೀಡಲಾಗಿದ್ದ ಉಜ್ಬೇಕಿಸ್ತಾನದ 18 ಮಕ್ಕಳು ಮೃತಪಟ್ಟ ಬಗ್ಗೆ ವಿವರಣೆ ನೀಡದೇ ಇದ್ದುದಕ್ಕೆ ಮಂಡಳಿಯು ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.






 

error: Content is protected !!
Scroll to Top