ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 31. ತನಗೆ ಮದುವೆ ಆಗೋಕೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಆತ್ಮಹತ್ಯೆ ಗೆ ಯತ್ನಿಸಿದ ಯುವಕನನ್ನು ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಸಂತೋಷ್ ಎಂದು ಗುರುತಿಸಲಾಗಿದೆ. ಊರಲ್ಲಿ ಹೊಲ-ಮನೆ ಕೆಲಸ ಮಾಡಿಕೊಂಡಿದ್ದ ಈತನಿಗೆ ಮದುವೆ ಆಗೋಕೆ ಹೆಣ್ಣು ಸಿಗದೇ ಇದ್ದುದರಿಂದ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

Also Read  ಜ್ವರದಿಂದ ಮಕ್ಕಳು ಮೂರಕ್ಕಿಂತ ಹೆಚ್ಚುದಿನ ಗೈರಾದಲ್ಲಿ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕರ ಆದೇಶ

 

error: Content is protected !!
Scroll to Top