ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು     

Theft, crime, Robbery

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 02. ಜೆರಾಕ್ಸ್ ಅಂಗಡಿಯಿಂದ ಸಾವಿರಾರು ರೂಪಾಯಿ ಕಳವುಗೈದಿರುವ ಘಟನೆ ಕೌಡಿಚ್ಚಾರಿನಲ್ಲಿ ವರದಿಯಾಗಿದೆ.

ಕೌಡಿಚ್ಚಾರಿನಲ್ಲಿರುವ ವಿಶ್ವನಾಥ ಗೌಡ ಎಂಬವರಿಗೆ ಸೇರಿದ ಜೆರಾಕ್ಸ್ ಅಂಗಡಿಯಿಂದ ಕಳವಾಗಿದ್ದು, ಅವರು ಅಂಗಡಿಗೆ ಬಂದಾಗ ಅಂಗಡಿಯ ಎದುರಿನ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದೆ. ಅಂಗಡಿ ಒಳಗೆ ನೋಡಿದಾಗ ಡ್ರವರ್ ನಲ್ಲಿದ್ದ ಸುಮಾರು 20 ಸಾವಿರ ನಗದು ಮತ್ತು ಮೊಬೈಲ್ ಕಳವಾಗಿದೆ ಎಂದು ವರದಿಯಾಗಿದೆ. ಸ್ಥಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Also Read  ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು

, puttur, mangalore, news kadaba

 

error: Content is protected !!
Scroll to Top