ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ     

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 02. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಮುಂಜಾನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಆರ್‌ಎಸ್ ಪುರ ಸೆಕ್ಟರ್‌ ನ ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಬಾದರ್‌ ಪುರ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ಬಳಿ ನುಸುಳುಕೋರರ ಚಲನ ವಲನವನ್ನು ಪತ್ತೆಹಚ್ಚಿದ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ಓರ್ವ ಪಾಕಿಸ್ತಾನ ಮೂಲದ ನುಸುಳುಕೋರ ಹತ್ಯೆಯಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.

 

Also Read  ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ದಾಂಜಲಿ ಬ್ಯಾನರ್ ! ➤ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್

 

error: Content is protected !!
Scroll to Top