ನೋಟು ನಿಷೇಧ ಕಾನೂನುಬಾಹಿರ ➤ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02.  ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ.

ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯನ್ನು ಕಾನೂನುಬಾಹಿರ ಎಂದು ಕರೆದಿರುವ ಅವರು, “ನನ್ನ ಪ್ರಕಾರ ನ. 08 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ನಿಷೇಧ ಕಾನೂನು ವಿರುದ್ದವಾಗಿ ಚಲಾಯಿಸಿದ ಅಧಿಕಾರ. ಹೀಗಾಗಿ ಅದು ಕಾನೂನು ಬಾಹಿರ. ಅದನ್ನು ಜಾರಿಗೊಳಿಸಿದ ರೀತಿ ಕಾನೂನಿಗೆ ಅನುಸಾರವಾಗಿಲ್ಲ” ಎಂದು ಹೇಳಿದ್ದಾರೆ.

error: Content is protected !!

Join the Group

Join WhatsApp Group