ಬೈಕ್ ಗೆ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಮನಗರ, ಜ. 02.  ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನಪಟ್ಟಣ ತಾಲೂಕಿನ ಪೊಲೀಸ್ ತರಬೇತಿ ಶಾಲೆ ಬಳಿ ವರದಿಯಾಗಿದೆ.

ಮೃತರನ್ನು ತಡಿಕವಾಗಿಲು ಗ್ರಾಮದ ನಿವಾಸಿ ಶಿವಸ್ವಾಮಿ (51) ಎಂದು ಗುರುತಿಸಲಾಗಿದೆ. ಮೃತ ಶಿವಸ್ವಾಮಿ ಅವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚನ್ನಪಟ್ಟಣದದಿಂದ ರಾಮನಗರದ ಕಡೆಗೆ ಹೊರಡುತ್ತಿದ್ದ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ನಂತರ ಡಿವೈಡರ್ ಗೆ ಗುದ್ದಿ ನಿಂತಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Also Read  ಪೊಲೀಸರನ್ನೂ ಬೆಂಬಿಡದೆ ಕಾಡುತ್ತಿರುವ ಕೋವಿಡ್-19 ➤ 55 ವರ್ಷ ಮೇಲ್ಪಟ್ಟವರಿಗೆ ವಿಶ್ರಾಂತಿ

 

error: Content is protected !!
Scroll to Top