ಕುಂದಾಪುರ: ಕಾರು ಅಪಘಾತ ➤ ದಂಪತಿ ಮೃತ್ಯು..!



(ನ್ಯೂಸ್ ಕಡಬ) newskadaba.com ಕುಂದಾಪುರ, ಜ. 03.   ಕಾರು ಢಿಕ್ಕಿಯಾದ ಪರಿಣಾಮ ವೃದ್ಧ ದಂಪತಿಗಳು ಮೃತಪಟ್ಟ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವರದಿಯಾಗಿದೆ.





ಮೃತ ದಂಪತಿಗಳನ್ನು ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಟ್ಟಿ (60) ಎಂದು ಗುರುತಿಸಲಾಗಿದೆ.






ಇವರ ಸಂಬಂಧಿಕರ ಮನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ ಮಹಾಮಲ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟರು , ಹಾಗೂ ಗಂಭೀರವಾಗಿ ಗಾಯಗೊಂಡಿದ್ದ ಸರೋಜಾ ಅವರು ಆಸ್ಪತ್ರೆಗೆ ಕರೆದೊಯ್ಯವ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಮಂಜುನಾಥ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

error: Content is protected !!
Scroll to Top