ಗುಂಪು ಘರ್ಷಣೆ   ➤ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ..!!!

(ನ್ಯೂಸ್ ಕಡಬ) newskadaba.com  ರಾಯ್‌ಪುರ, ಜ.03. ರಾಯ್ ಪುರ ದಕ್ಷಿಣಕ್ಕೆ 350 ಕಿ.ಮೀ ದೂರದಲ್ಲಿರುವ ಮಾವೋವಾದಿ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪ್ರಮುಖ ಕ್ಯಾಥೋಲಿಕ್ ಚರ್ಚ್  ಅನ್ನು ಧ್ವಂಸಗೊಳಿಸಲಾಯಿತು ಎಂದು ತಿಳಿದುಬಂದಿದೆ.

ಪ್ರತಿಭಟನಾಕಾರರ ಗುಂಪನ್ನು ತಡೆಯಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಅವರ ತಲೆಗೆ ಗಾಯವಾಗಿದೆ. ಅಲ್ಲದೆ, ಪ್ರತಿಭಟನಾಕಾರರಿಂದ ಎರಡು ಸಣ್ಣ ಚರ್ಚ್‌ಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.

ಗಾಯಗೊಂಡ ಎಸ್‌ಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Also Read  ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ➤ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!

 

 

error: Content is protected !!
Scroll to Top